ಬಸವಲಿಂಗಶಾಸ್ತ್ರಿ ಬಾಳೀಮಠ (೧೭.೦೪.೧೯೧೭): ಹಿರಿಯ ರಂಗ ಕಲಾವಿದರಾದ ಬ. ಶಿ. ಬಾಳೀಮಠ ರವರು ಹುಟ್ಟಿದ್ದು ಹಾವೇರಿ ತಾಲ್ಲೂಕಿನ ದೇವಗಿರಿಯಲ್ಲಿ. ತಂದೆ ಪುಟ್ಟಯ್ಯ ಚ.ಹಿರೇಮಠ. ತಾಯಿ ಪಾರ್ವತಮ್ಮ. ಪ್ರೌಢಶಾಲೆಯಲ್ಲಿ ಓದುತ್ತಿರುವಾಗಲೇ ನಾಟಕಗಳತ್ತ ಒಲವು. ಶಾಲೆಯ ವಿಶೇಷ ಕಾರ್ಯಕ್ರಮಗಳಿಗೆಲ್ಲಾ ಚಿಕ್ಕ ಚಿಕ್ಕ ಏಕಾಂಕ ನಾಟಕಗಳನ್ನು ಬರೆದು ರಂಗದ ಮೇಲೆ ತಂದು ನಟರಾಗಿಯೂ ಗಳಿಸಿದ ಯಶಸ್ಸು. ’ದಾರಿ ದೀಪ’ ಎಂಬ ಕೈ ಬರಹದ ಪತ್ರಿಕೆಯ ಸಂಪಾದಕರಾಗಿ, ಹಲವಾರು ಸಹ ವಿದ್ಯಾರ್ಥಿಗಳಿಂದ ಬರೆಸಿ, ಬರೆದು ಪ್ರಕಟಿಸಿದ ಸಾಹಸಿ ವಿದ್ಯಾರ್ಥಿ. ಶಾಲೆಯ ಪಾಠಕ್ಕಿಂತ ಪುರಾಣ ಪ್ರವಚನಗಳನ್ನು ಕೇಳುವ, ನಾಟಕ ದೊಡ್ಡಾಟಗಳನ್ನು ನೋಡುವ …
ಪೂರ್ತಿ ಓದಿ...ಅಜ್ಜಂಪುರ ಜಿ. ಸೂರಿ
ಅಜ್ಜಂಪುರ ಜಿ. ಸೂರಿ (೧೭.೦೪.೧೯೩೯ – ೨೫.೦೫.೨೦೦೮): ಕವಿ, ವಚನಕಾರ, ಕಾದಂಬರಿಕಾರ, ಅನುವಾದಕ ಎಲ್ಲಕ್ಕಿಂತ ಹೆಚ್ಚಾಗಿ ಸಹೃದಯ ಸಾಹಿತಿ ಎನಿಸಿಕೊಂಡಿದ್ದ ಜಿ. ಸೂರ್ಯನಾರಾಯಣರವರು ಹುಟ್ಟಿದ್ದು ಚಿಕ್ಕಮಗಳೂರು ಜಿಲ್ಲೆ ಯ ತರೀಕೆರೆ ತಾಲ್ಲೂಕಿನ ಅಜ್ಜಂಪುರದಲ್ಲಿ ೧೯೩೯ ರ ಏಪ್ರಿಲ್ ೧೭ ರಂದು. ಗೋವಿಂದಪ್ಪ, ತಾಯಿ ಪಾರ್ವತಮ್ಮ. ತಂದೆಯವರದು ಬಳೆಮಾರುವ ಕಾಯಕ ಪ್ರವೃತ್ತಿ ಆಯುರ್ವೇದ ಮತ್ತು ಅಧ್ಯಾತ್ಮ. ಲೌಕಿಕ ಚಿಕಿತ್ಸೆಗೆ ಆಯುರ್ವೇದ ಚಿಕಿತ್ಸೆ ನೀಡಿದರೆ ಪಾರಮಾರ್ಥಿಕಕ್ಕೆ ಅಧ್ಯಾತ್ಮ ಚಿಕಿತ್ಸೆ ನೀಡುತ್ತ ಗೋವಿಂದಾರ್ಯರೆನಿಸಿದ್ದರು. ಈ ಪರಿಸರದಲ್ಲಿ ಬೆಳೆದ ಸೂರಿಯವರ ಮೇಲೂ ಆದ ಪರಿಣಾಮದಿಂದ ರೂಢಿಸಿಕೊಂಡ ಸುಸಂಸ್ಕೃತ ಬದುಕು. ಅಜ್ಜಂಪುರದಲ್ಲಿ …
ಪೂರ್ತಿ ಓದಿ...ಡಾ. ಮಲ್ಲಿಕಾಘಂಟಿ
ಡಾ. ಮಲ್ಲಿಕಾಘಂಟಿ (೧೭-೪-೧೯೫೯): ಸ್ತ್ರೀವಾದಿ, ಮಹಿಳಾ ಹೋರಾಟಗಾರ್ತಿ, ಸ್ತ್ರೀಯರ ಸಾಮಾಜಿಕ ಸುಧಾರಣೆಗೋಸ್ಕರ ದುಡಿಯುತ್ತಿರುವ ಮಲ್ಲಿಕಾ ಘಂಟಿಯವರು ಹುಟ್ಟಿದ್ದು ವಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿಯ ಅಗಸಬಾಳ ಗ್ರಾಮದಲ್ಲಿ. ತಂದೆ ಶಂಕರಪ್ಪ ಮತ್ತು ತಾಯಿ ಪಾರ್ವತಿಬಾಯಿ. ಪ್ರಾಥಮಿಕ ವಿದ್ಯಾಭ್ಯಾಸ ಹಂಗರಗಿ ಗ್ರಾಮ ಮತ್ತು ಬಾದಾಮಿಯಲ್ಲಿ. ವೀರ ಪುಲಿಕೇಶಿ ಹೈಸ್ಕೂಲಿನಲ್ಲಿ ಪಿ.ಯು.ವರೆಗೆ ವಿದ್ಯಾಭ್ಯಾಸ, ಬಾಗಲಕೋಟೆ ಮತ್ತು ಜಮಖಂಡಿ ಬಸವೇಶ್ವರ ವಿದ್ಯಾವರ್ಧಕ ಸಂಘದಿಂದ ಬಿ.ಎ. ಪದವಿ. ಧಾರವಾಡದ ವಿಶ್ವವಿದ್ಯಾಲಯದಿಂದ “ಕನ್ನಡದಲ್ಲಿ ಮಹಿಳಾ ಕಥಾ ಸಾಹಿತ್ಯ” ಕುರಿತು ಬರೆದ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ. ಓದಿನ ಜೊತೆಗೆ ಸಾಹಿತ್ಯ ರಚನೆಯ ಹವ್ಯಾಸ. ವಿದ್ಯಾರ್ಥಿನಿಯಾಗಿದ್ದಾಗಲೇ …
ಪೂರ್ತಿ ಓದಿ...ಆನಂದಕಂದ
ಆನಂದಕಂದ (೧೬-೪-೧೯೦೦ – ೩೦-೧೦-೧೯೮೨): ಸಂಪಾದನೆ, ಸಂಶೋಧನೆಯಲ್ಲಿ ಶ್ರೇಷ್ಠರೆನಿಸಿದ ಆನಂದಕಂದರ ನಿಜನಾಮ ಬೆಟಗೇರಿ ಕೃಷ್ಣಶರ್ಮ. ಇವರು ಹುಟ್ಟಿದ್ದು ಗೋಕಾಕ ತಾಲ್ಲೂಕಿನ ಬೆಟಗೇರಿ. ತಂದೆ ಶ್ರೀನಿವಾಸರಾವ್, ತಾಯಿ ರಾಧಾಬಾಯಿ. ಪ್ರಾರಂಭಿಕ ಶಿಕ್ಷಣ ಬೆಟಗೇರಿಯಲ್ಲೇ. ಮುಲ್ಕಿ ಪರೀಕ ಪಾಸು ಮಾಡಿದ ನಂತರ ಪುಣೇಕರ ನರಸಿಂಹಾಚಾರ್ಯರಲ್ಲಿ ಶಿಷ್ಯತ್ವ. ೧೯೨೬ರಲ್ಲಿ ಬೆಂಗಳೂರಿನ ಆರ್ಯ ವಿದ್ಯಾಶಾಲೆಯ ಶಿಕ್ಷಕ ವೃತ್ತಿಯ ಹೊಣೆ. ಪುನಃ ಧಾರವಾಡಕ್ಕೆ ಹೋಗಿ ಗೆಳೆಯರ ಗುಂಪಿನ ಸಂಘಟನೆ. ಮನೋಹರ ಗ್ರಂಥಮಾಲೆಯ ಪ್ರಾರಂಭಕ್ಕೆ ಕಾರಣೀಭೂತರು. ೧೯೩೮ರಲ್ಲಿ ‘ಜಯಂತಿ’ ಪತ್ರಿಕೆ ಪ್ರಾರಂಭ. ಹಲವಾರು ಲೇಖಕರನ್ನು ಹುರಿದುಂಬಿಸಿ ಪತ್ರಿಕೆಗೆ ಬರೆಸಿದರು. ನೂರಾರು ಲೇಖಕರನ್ನು ಪತ್ರಿಕೆಯ …
ಪೂರ್ತಿ ಓದಿ...ಡಾ. ಅಬ್ದುಲ್ ಹಮೀದ್
ಡಾ. ಅಬ್ದುಲ್ ಹಮೀದ್ಕ (೧೫-೪-೧೯೩೭): ನ್ನಡ, ಹಿಂದಿ ಎರಡು ಭಾಷೆಯಲ್ಲೂ ಪ್ರಾವೀಣ್ಯತೆ ಗಳಿಸಿರುವ ಅಬ್ದುಲ್ ಹಮೀದ್ರವರು ಹುಟ್ಟಿದ್ದು ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ತಾಲ್ಲೂಕಿನ ಹಂದನಕೆರೆ ಗ್ರಾಮದಲ್ಲಿ. ತಂದೆ ಮಹಮದ್ ಬುಡೇನ್ ಸಾಬ್, ತಾಯಿ ಮೆಹಬೂಬ್ ಬೀ. ಪ್ರಾರಂಭಿಕ ಶಿಕ್ಷಣ ಹಂದನಕೆರೆಯಲ್ಲಿ. ಹೈಸ್ಕೂಲು ಓದಿದ್ದು ತಿಪಟೂರಿನಲ್ಲಿ. ಇಂಟರ್ ಮೀಡಿಯೆಟ್ ಪಾಸು ಮಾಡಿದ್ದು ಭೂಪಾಲ್ನಲ್ಲಿ. ನಂತರ ಪದವಿ ಗಳಿಸಿದ್ದೆಲ್ಲ ಅಪಾರ. ಸ್ವ-ಅಧ್ಯಯನದಿಂದ ಬಾಹ್ಯ ವಿದ್ಯಾರ್ಥಿಯಾಗಿ ಸಾಸಿದ್ದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ. ಪದವಿ ಮತ್ತು ಎಂ.ಎ. ಪದವಿ. ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎಡ್. ಪದವಿ. “ಸೂಫಿ ಪಥ …
ಪೂರ್ತಿ ಓದಿ...ಎಂ.ಪ್ರಭಾಕರ್
ಎಂ.ಪ್ರಭಾಕರ್ (೧೫.೦೪.೧೯೨೨) ಕವನದ ಪ್ರತಿಯೊಂದು ಸಾಲನ್ನೂ ಆಸ್ವಾದಿಸಿ, ಅಂತರ್ಮುಖಿಯಾಗಿ ಹೃದಯದಾಳದಿಂದ ಹಾಡುವ ಗಾಯಕರಾದ ಪ್ರಭಾಕರ ರವರು ಹುಟ್ಟಿದ್ದು ಭಟ್ಕಳದಲ್ಲಿ. ತಂದೆ ಎಂ. ರಂಗರಾವ್, ಸಂಗೀತ, ಸಾಹಿತ್ಯ, ಅಭಿನಯ, ಚಿತ್ರಕಲೆಯಲ್ಲಿ ಪರಿಣಿತರು. ತಾಯಿ ಶಿಕ್ಷಕಿಯಾಗಿದ್ದ ಕಾವೇರಿ ಬಾಯಿ. ಕೀರ್ತನಕಾರ, ಸಂಗೀತಗಾರರ ಮನೆತನ. ಅಣ್ಣ ತಮ್ಮಂದಿರೆಲ್ಲರೂ ಒಂದಲ್ಲ ಒಂದು ರೀತಿ ಸಂಗೀತ ವಾದ್ಯದಲ್ಲಿ ಪರಿಣತರೆ. ಸಹೋದರಿಯರಾದ ಪಂಢರಿಬಾಯಿ, ಮೈನಾವತಿಯವರು ಚಿತ್ರಲೋಕದ ತಾರೆಯರು. ಸಂಚಾರಿ ನಾಟಕ ಮಂಡಳಿಯೊಂದು ಊರಿಗೆ ಬಂದಾಗ ಅದರೊಡನೆ ಸೇರಿ ರಂಗಗೀತೆಗಳು, ದೇವರ ನಾಮಗಳು, ಕೀರ್ತನೆಗಳನ್ನು ಹಾಡುತ್ತಾ ಊರೂರು ಸುತ್ತಿದರು. ಸುತ್ತಾಟ ಬೇಸರವೆನಿಸಿ ಒಂದು ರೀತಿ …
ಪೂರ್ತಿ ಓದಿ...ಡಾ. ದೇವೇಂದ್ರಕುಮಾರ ಹಕಾರಿ
ಡಾ. ದೇವೇಂದ್ರಕುಮಾರ ಹಕಾರಿ (೧೪-೪-೧೯೩೧ – ೭-೪-೨೦೦೭): ಜೀವನಚರಿತ್ರೆ, ವಿಮರ್ಶೆ, ಕಾವ್ಯ, ಕಾದಂಬರಿ ಹೀಗೆ ಎಲ್ಲ ಪ್ರಕಾರದಲ್ಲಿಯೂ ಹೆಸರು ಗಳಿಸಿರುವ ಹಕಾರಿಯವರು ಹುಟ್ಟಿದ್ದು ರಾಯಚೂರು ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಚಿಕ್ಕೇನಕೊಪ್ಪ ಗ್ರಾಮದಲ್ಲಿ. ತಂದೆ ಸಿದ್ದಪ್ಪ, ತಾಯಿ ಮಲ್ಲವ್ವ. ಪ್ರಾಥಮಿಕ ಶಿಕ್ಷಣ ಪಡೆದುದು ಹುಟ್ಟಿದೂರಿನಲ್ಲಿ. ಕಲೆ, ಸಂಸ್ಕೃತಿ, ನಾಟಕ, ವಿಜ್ಞಾನ ಎಲ್ಲದರಲ್ಲಿಯೂ ಕಲಿತು ಏಳನೆಯ ವರ್ಗಕ್ಕೆ ಸೇರಿದ್ದು ಗುಲಬರ್ಗಾದ ಉಸ್ಮಾನಿಯಾ ಹೈಸ್ಕೂಲು. ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಬಿ.ಎ. ಮತ್ತು ಎಂ.ಎ. ಪದವಿ. ಕರ್ನಾಟಕ ವಿಶ್ವವಿದ್ಯಾಲಯದಿಂದ ‘ಜಾನಪದ ಕಥನ ಗೀತೆಗಳಲ್ಲಿ ದುಃಖಾಂತ ನಿರೂಪಣೆ’ ಪ್ರಬಂಧ ಮಂಡಿಸಿ ಪಡೆದ ಪಿಎಚ್.ಡಿ …
ಪೂರ್ತಿ ಓದಿ...ವಿಜಯ ಸಾಸನೂರ
ವಿಜಯ ಸಾಸನೂರ (೧೪.೪.೧೯೪೮ – ೦೧.೦೩.೨೦೦೧): ರೋಚಕ ಕಾದಂಬರಿಗಳನ್ನೂ ಧಾರಾವಾಹಿಯಾಗಿ ಪತ್ರಿಕೆಗಳಲ್ಲಿ ಪ್ರಕಟಿಸಿ ಕನ್ನಡ ಓದುಗರನ್ನು ಬೆಳೆಸುವುದರಲ್ಲಿ ಪ್ರಮುಖರಾಗಿದ್ದ ವಿಜಯಸಾಸನೂರರು ಹುಟ್ಟಿದ್ದು ವಿಜಾಪುರದಲ್ಲಿ ೧೯೪೮ ರ ಏಪ್ರಿಲ್ ೧೪ ರಂದು. ತಂದೆ ಬಿ.ಟಿ. ಸಾಸನೂರ, ಕನ್ನಡ ಖ್ಯಾತ ಪ್ರಾಧ್ಯಾಪಕರು, ಪ್ರಿನ್ಸಿಪಾಲರು, ಹಾಗೂ ಲೋಕಸೇವಾ ಆಯೋಗದ ಸದಸ್ಯರು ಆಗಿದ್ದರು. ತಾಯಿ ಸುಮಿತ್ರಾಬಾಯಿಯವರು ವಿದ್ಯಾ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿದ್ದವರು. ಪ್ರಾರಂಭಿಕ ಶಿಕ್ಷಣ ವಿಜಾಪುರದಲ್ಲಿ. ಎಸ್.ಎಸ್.ಎಲ್.ಸಿ. ಯಲ್ಲಿ ೪ ನೆಯ ರ್ಯಾಂಕ್ ಪಡೆದ ವಿದ್ಯಾರ್ಥಿ. ಬೀದರ್ನ ಭೂಮರೆಡ್ಡಿ ಕಾಲೇಜಿನಿಂದ ಪಡೆದ ಬಿ.ಎಸ್ಸಿ. ಪದವಿ (೪ ನೇ ರ್ಯಾಂಕ್). ಮುಂಬಯಿ …
ಪೂರ್ತಿ ಓದಿ...ಶಂಕರಗೌಡ ಬೆಟ್ಟದೂರು
ಶಂಕರಗೌಡ ಬೆಟ್ಟದೂರು (೧೪.೦೪.೧೯೨೮): ಕರ್ನಾಟಕದ ಪ್ರಸಿದ್ಧ ಕಲಾವಿದರಲ್ಲಿ ಒಬ್ಬರು. ಕರ್ನಾಟಕ ಸಾಂಪ್ರದಾಯಿಕ ಚಿತ್ರಕಲೆಗೆ ಬಂಗಾಳಿ ಕಲೆಯನ್ನು ಸಂಮಿಶ್ರಣ ಮಾಡಿ ವಿನೂತನ ಶೈಲಿಯನ್ನು ರೂಪಿಸಿದ ಕೀರ್ತಿ ಶಂಕರಗೌಡ ಬೆಟ್ಟದೂರು ಅವರದ್ದು. ಜೀವನ: ಶಂಕರ ಗೌಡರು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಬೆಟ್ಟದೂರಿನಲ್ಲಿ ಏಪ್ರಿಲ್ ೧೪, ೧೯೨೮ರ ವರ್ಷದಲ್ಲಿ ಜನಿಸಿದರು. ಗುಲ್ಬರ್ಗದ ಸರಕಾರಿ ಪ್ರೌಢಶಾಲೆಯಲ್ಲಿ ಓದಿದ ನಂತರದಲ್ಲಿ ಮದರಾಸು, ಮುಂಬಯಿಗಳಲ್ಲಿ ತಮ್ಮ ಶಿಕ್ಷಣವನ್ನು ನಡೆಸಿದ ಶಂಕರಗೌಡರು ಮುಂಬೈನ ಚಿತ್ರಕಲಾ ಶಾಲೆ ಮತ್ತು ವಿಶ್ವಭಾರತಿ ಶಾಂತಿ ನಿಕೇತನಗಳಲ್ಲಿ ಚಿತ್ರಕಲೆಯನ್ನು ಅಭ್ಯಾಸ ಮಾಡಿದರು. ಶಾಂತಿನಿಕೇತನದಲ್ಲಿ ಅವರು ವಿಶ್ವದ ಶ್ರೇಷ್ಠ ಚಿತ್ರಗಾರರಲ್ಲೊಬ್ಬರಾದ …
ಪೂರ್ತಿ ಓದಿ...ಭಾಗ್ಯಮೂರ್ತಿ
ಭಾಗ್ಯಮೂರ್ತಿ (೧೩.೦೪.೧೯೫೧): ಗಾನಕೋಗಿಲೆ ಎನಿಸಿರುವ ಭಾಗ್ಯಮೂರ್ತಿಯವರು ಹುಟ್ಟಿದ್ದು ಬೆಂಗಳೂರು. ತಂದೆ ಸುಬ್ರಹ್ಮಣ್ಯಶಾಸ್ತ್ರಿ, ತಾಯಿ ರಂಗನಾಯಕಮ್ಮ. ಬಿ.ಎಂ.ಎಸ್. ಮಹಿಳಾ ಕಾಲೇಜಿನಿಂದ ಪಡೆದ ಬಿ.ಎ. ಪದವಿ, ಸಾಂಪ್ರದಾಯಿಕ ಸಂಗೀತ ಪರಂಪರೆಯ ಮನೆತನ. ಚಿಕ್ಕಂದಿನಿಂದಲೂ ಸಂಗೀತದಲ್ಲಿ ಬೆಳೆದ ಆಸಕ್ತಿ. ಎಂ. ಪ್ರಭಾಕರ್ ರವರಲ್ಲಿ ಕರ್ನಾಟಕ ಹಾಗೂ ಸುಗಮ ಸಂಗೀತದಲ್ಲಿ ಪಡೆದ ಶಿಕ್ಷಣ. ನೃತ್ಯ ರಂಗ ಪ್ರವೇಶಗಳ ಹಲವಾರು ಕಾರ್ಯಕ್ರಮಗಳಲ್ಲಿ, ದೇವಾಲಯ ಉತ್ಸವಗಳಲ್ಲಿ ಪ್ರಧಾನ ಗಾಯಕಿಯಾಗಿ ನಡೆಸಿಕೊಟ್ಟ ಕಾರ್ಯಕ್ರಮಗಳು. ಅಂತಾರಾಷ್ಟ್ರೀಯ ಖ್ಯಾತಿಯ ನೃತ್ಯಗಾರ್ತಿಯರಾದ ಪದ್ಮಾ ಸುಬ್ರಹ್ಮಣ್ಯಂ, ಕೃಷ್ಣವೇಣಿ, ಶಾಂತಾ ಧನಂಜಯ ಮುಂತಾದವರ ನೃತ್ಯ ಕಾರ್ಯಕ್ರಮಗಳಿಗೆ ನೀಡಿದ ನೃತ್ಯ ಸಂಗೀತ. ಜಾನಪದ …
ಪೂರ್ತಿ ಓದಿ...