ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 02

ಶ್ಲೋಕ – 51

ಕರ್ಮಜಂ ಬುದ್ಧಿಯುಕ್ತಾ ಹಿ ಫಲಂ ತ್ಯಕ್ತ್ವಾ ಮನೀಷಿಣಃ ।
ಜನ್ಮಬಂಧವಿನಿರ್ಮುಕ್ತಾಃ ಪದಂ ಗಚ್ಛಂತ್ಯನಾಮಯಮ್ ॥೫೧॥

ಕರ್ಮಜಮ್ ಬುದ್ಧಿಯುಕ್ತಾಃ ಹಿ ಫಲಮ್ ತ್ಯಕ್ತ್ವಾ ಮನೀಷಿಣಃ ಜನ್ಮಬಂಧ ವಿನಿರ್ಮುಕ್ತಾಃ ಪದಮ್ ಗಚ್ಛಂತಿ ಅನಾಮಯಮ್ –ಬಲ್ಲವರು ಭಗವಂತನ ಅರಿವು ಪಡೆದು, ಕರ್ಮ ಫಲದ ಹೊಣೆಯನ್ನು ಅವನಿಗೊಪ್ಪಿಸಿ, ಹುಟ್ಟು ಸಾವಿನ ಕಟ್ಟು ಕಳಚಿಕೊಂಡು, ಕ್ಲೇಶರಹಿತವಾದ ಪದವನ್ನು ಪಡೆಯುತ್ತಾರೆ.

ನಿಜವಾದ ಮನಿಷಿಗಳು ತಮ್ಮ ಮನಸ್ಸನ್ನು ತಾವೇ ನಿಯಂತ್ರಿಸಿಕೊಳ್ಳಬಲ್ಲ ಜಿತೇಂದ್ರಿಯರು. ಆತ್ಮಸಂಯಮ ಇರುವ ಜ್ಞಾನದ ಮಾರ್ಗದಲ್ಲಿ ಸಾಗಿ ಆ ಅರಿವನ್ನು ಪಡೆದವರು. ಬುದ್ಧಿವಂತರಾದ ಜ್ಞಾನಿಗಳು ಕರ್ಮದಿಂದ ಬರತಕ್ಕಂತಹ ಫಲದ ಮೋಹವನ್ನು(attachment) ಬಿಟ್ಟು ಅದನ್ನು ಭಗವಂತನಿಗೆ ಅರ್ಪಿಸುತ್ತಾರೆ. ಹೀಗೆ ಯಾರು ಕರ್ಮ ಫಲವನ್ನು ಭಗವಂತನಿಗೆ ಅರ್ಪಣ ಬುದ್ಧಿಯಿಂದ ತ್ಯಾಗ ಮಾಡಿ ನಿರ್ವಂಚನೆಯಿಂದ ಕರ್ಮ ಮಾಡುತ್ತಾರೆ, ಅವರು ಕರ್ಮ ಮಾಡಿದರೂ ಕರ್ಮಬಂಧನಕ್ಕೊಳಪಡದೆ, ಎಲ್ಲಾ ಬಂಧನವನ್ನು ಕಳಚಿಕೊಂಡು, ದೋಷ ರಹಿತವಾದ ಮೋಕ್ಷವನ್ನು ಪಡೆಯುತ್ತಾರೆ. ಆದ್ದರಿಂದ ಕರ್ತವ್ಯ ಕರ್ಮವನ್ನು ಭಗವಂತನ ಆರಾಧನೆ ಎಂದು ಮಾಡಿ ಮೋಕ್ಷ ಪಡೆಯಬೇಕು. ಇದನ್ನು ಹೊರತುಪಡಿಸಿ ‘ನಾನು ಜ್ಞಾನಿ, ನಾನೇನೂ ಮಾಡಲಾರೆ’ ಎನ್ನುವ ಧೋರಣೆ ಸರಿಯಲ್ಲ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *