ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 03

ಶ್ಲೋಕ – 12

ಇಷ್ಟಾನ್ ಭೋಗಾನ್ ಹಿ ವೋ ದೇವಾ ದಾಸ್ಯಂತೇ ಯಜ್ಞಭಾವಿತಾಃ ।
ತೈರ್ದತ್ತಾನಪ್ರದಾಯೈಭ್ಯೋ ಯೋ ಭುಂಕ್ತೇ ಸ್ತೇನ ಏವ ಸಃ ॥೧೨॥

ಇಷ್ಟಾನ್ ಭೋಗಾನ್ ಹಿ ವಃ ದೇವಾಃ ದಾಸ್ಯಂತೇ ಯಜ್ಞ ಭಾವಿತಾಃ ತೈಃ ದತ್ತಾನ್ ಅಪ್ರದಾಯ ಏಭ್ಯಃ ಯಃ ಭುಂಕ್ತೇ ಸ್ತೇನಃ ಏವ ಸಃ -ಇಂಥ ಯಜ್ಞದಿಂದ ಬಲಗೊಂಡ ದೇವತೆಗಳು ನೀವು ಬಯಸಿದ ಬಯಕೆಗಳನ್ನು ಈಡೇರಿಸುತ್ತಾರೆ. ಅವರು ನೀಡಿದ್ದನ್ನು ಅವರಿಗೆ ನೀಡದೆ ತಿನ್ನುವವನು ಕಳ್ಳನೇ ಸರಿ.

ನಮಗೆ ಏನು ಬೇಕೋ ಅದನ್ನು ಈ ಪ್ರಕೃತಿ ಕೊಡುತ್ತದೆ. ಹಾಗಿರುವಾಗ ಅದನ್ನು ಉಪಯೋಗಿಸುವ ನಮಗೆ ಕೃತಜ್ಞತೆ ಬೇಕು. ಅದನ್ನು ಬಿಟ್ಟು ‘ಇದು ನನ್ನದು’ ಎಂದು ಅಧಿಕಾರ ಅಹಂಕಾರ ತೋರಿದರೆ ಉದ್ಧಾರವಿಲ್ಲ. ಪ್ರಕೃತಿ ಕೊಟ್ಟಿದ್ದನ್ನು ಕೃತಜ್ಞತೆ ಸಲ್ಲಿಸದೆ ಪಡೆದುಕೊಂಡು ‘ಇದು ನನ್ನದು’ ಎನ್ನುವವನು ಕಳ್ಳನೇ ಸರಿ!

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *