ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 03

ಶ್ಲೋಕ – 41

ತಸ್ಮಾತ್ ತ್ವಮಿಂದ್ರಿಯಾಣ್ಯಾದೌ ನಿಯಮ್ಯ ಭರತರ್ಷಭ ।
ಪಾಪ್ಮಾನಂ ಪ್ರಜಹಿ ಹ್ಯೇನಂ ಜ್ಞಾನವಿಜ್ಞಾನನಾಶನಮ್ ॥೪೧॥

ತಸ್ಮಾತ್ ತ್ವಮ್ ಇಂದ್ರಿಯಾಣಿ ಆದೌ ನಿಯಮ್ಯ ಭರತ ಋಷಭ

ಪಾಪ್ಮಾನಮ್ ಪ್ರಜಹಿ ಹಿ ಏನಮ್ ಜ್ಞಾನ ವಿಜ್ಞಾನ ನಾಶನಮ್-ಅದರಿಂದ , ಓ ಭರತವಂಶದ ವೀರ, ಮೊದಲು ನೀನು ಇಂದ್ರಿಯಗಳನ್ನು ಹದ್ದಿನಲ್ಲಿರಿಸಿಕೊಂಡು, ಅರಿವನ್ನೂ ಆಳವಾದ ಚಿಂತನ ಶಕ್ತಿಯನ್ನೂ ಹಾಳು ಗೆಡವಬಲ್ಲ ಈ ಪಾಪಿಯನ್ನು ಒದ್ದೋಡಿಸು.

ಇಂತಹ ಮಹಾ ವೈರಿಯನ್ನು ನಾವು ಮೊದಲ ಹಂತದಲ್ಲೇ ನಿಯಂತ್ರಿಸಬೇಕು. ಈ ಶತ್ರುವಿನ ಮೊದಲ ಪ್ರವೇಶ ದ್ವಾರವಾದ ಇಂದ್ರಿಯದಲ್ಲೇ ಅದರ ನಿಯಂತ್ರಣ ಮಾಡಬೇಕು. ನಮ್ಮ ಜ್ಞಾನ(ಶ್ರವಣ)ವನ್ನು, ವಿಜ್ಞಾನ(ಮನನ-ನಿಧಿಧ್ಯಾಸನ)ವನ್ನು ಹಾಳುಗೆಡವಿ, ನಮ್ಮ ಚಿಂತನಾ ಶಕ್ತಿಯನ್ನು ನಾಶಮಾಡಬಲ್ಲ ಈ ಮಹಾ ಪಾಪಿಯನ್ನು ಓದ್ದೊಡಿಸು ಎನ್ನುತ್ತಾನೆ ಕೃಷ್ಣ. ಆದರೆ ಹೇಗೆ? ಇದಕ್ಕೆ ಯಾರು ಸಹಾಯ ಮಾಡುತ್ತಾರೆ ? ಮುಂದೆ ಕೇಳಿ!

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *