ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 04

ಶ್ಲೋಕ – 01

ಹಿಂದೆ ಕೃಷ್ಣ ಜ್ಞಾನಮಾರ್ಗ ಮತ್ತು ಕರ್ಮಮಾರ್ಗದ ಬಗ್ಗೆ ಎರಡನೇ ಅಧ್ಯಾಯದಲ್ಲಿ ಪ್ರಸ್ತಾಪಿಸಿ, ಆ ನಂತರ ಮೂರನೇ ಅಧ್ಯಾಯದಲ್ಲಿ ಕರ್ಮಯೋಗದ ವಿಸ್ತಾರವನ್ನು ತಿಳಿಸಿದ. ನಾಲ್ಕನೇ ಅಧ್ಯಾಯದಲ್ಲಿ ಭಗವಂತನ ಜ್ಞಾನದ ಅರಿವಿನ ಮುಖ ಮತ್ತು ಕರ್ಮದ ಪ್ರಭೇದಗಳನ್ನು ಕೃಷ್ಣ ವಿವರಿಸುತ್ತಾನೆ. ಹಿಂದೆ ಹೇಳಿದ ಜ್ಞಾನಯೋಗ ಮತ್ತು ಕರ್ಮಯೋಗವನ್ನೇ ವಿಸ್ತರಿಸಿ ಜ್ಞಾನದ ಮಹತ್ವ ಮತ್ತು ಕರ್ಮದ ಪ್ರಭೇದಗಳ ಜೊತೆಗೆ ಈ ಎರಡು ಮಾರ್ಗದಿಂದ ನಾವು ಪಡೆಯತಕ್ಕಂತಹ ಭಗವಂತನ ಮಹಿಮೆ- ಇದನ್ನು ಈ ಅಧ್ಯಾಯದಲ್ಲಿ ಕಾಣಬಹುದು. ಈ ಅಧ್ಯಾಯ ಕೃಷ್ಣನ ಮಾತಿನೊಂದಿಗೆ ಆರಂಭವಾಗುತ್ತದೆ.

ಭಗವಾನುವಾಚ ।
ಇಮಂ ವಿವಸ್ವತೇ ಯೋಗಂ ಪ್ರೋಕ್ತವಾನಹಮವ್ಯಯಮ್ ।
ವಿವಸ್ವಾನ್ ಮನವೇ ಪ್ರಾಹ ಮನುರಿಕ್ಷ್ವಾಕವೇSಬ್ರವೀತ್ ॥೧॥

ಭಗವಾನ್ ಉವಾಚ-ಭಗವಂತ ಹೇಳಿದನು : ಇಮಮ್ ವಿವಸ್ವತೇ ಯೋಗಮ್ ಪ್ರೋಕ್ತವಾನ್ ಅಹಮ್ ಅವ್ಯಯಮ್ |

ವಿವಸ್ವಾನ್ ಮನವೇ ಪ್ರಾಹ ಮನುಃ ಇಕ್ಷ್ವಾಕವೇ ಅಬ್ರವೀತ್ -ಅಳಿವಿರದ ಈ ಸಾಧನ ಮಾರ್ಗವನ್ನು ನಾನು ಸೂರ್ಯನಿಗೆ ಹೇಳಿದ್ದೆ. ಸೂರ್ಯ ಮನುವಿಗೆ ಹೇಳಿದ್ದ. ಮನು ಇಕ್ಷ್ವಾಕುವಿಗೆ ಹೇಳಿದ್ದ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *