ಶ್ಲೋಕ – 09
ಜನ್ಮ ಕರ್ಮ ಚ ಮೇ ದಿವ್ಯಮೇವಂ ಯೋ ವೇತ್ತಿ ತತ್ವತಃ ।
ತ್ಯಕ್ತ್ವಾ ದೇಹಂ ಪುನರ್ಜನ್ಮ ನೈತಿ ಮಾಮೇತಿ ಸೋSರ್ಜುನ ॥೯॥
ಜನ್ಮ ಕರ್ಮ ಚ ಮೇ ದಿವ್ಯಮ್ ಏವಮ್ ಯಃ ವೇತ್ತಿ ತತ್ವತಃ |
ತ್ಯಕ್ತ್ವಾ ದೇಹಮ್ ಪುನಃ ಜನ್ಮ ನ ಏತಿ ಮಾಮ್ ಏತಿ ಸಃ ಅರ್ಜುನ-ಹೀಗೆ ನನ್ನ ಅಲೌಕಿಕವಾದ ಹುಟ್ಟಿನ, ಕಜ್ಜದ ನಿಜವನ್ನರಿತವನು ದೇಹವನ್ನು ತೊರೆದು ಮರಳಿ ಹುಟ್ಟುವುದಿಲ್ಲ. ಅರ್ಜುನ-ಅವನು ನನ್ನನ್ನು ಸೇರುತ್ತಾನೆ.
ಹೀಗೆ ಭಗವಂತನ ಜ್ಞಾನಾನಂದಮಯ, ದಿವ್ಯ(Divine), ಲೀಲಾಮಯ ಅವತಾರದ ಅರಿವು ಯಥಾವತ್ತಾಗಿ(ತತ್ವತಃ) ಅರಿತರೆ, ಅದು ನಮಗೆ ಮೋಕ್ಷ ಮಾರ್ಗವನ್ನು ತೋರಬಲ್ಲದು. ಇದು ಮರು-ಹುಟ್ಟಿಲ್ಲದ ಮೋಕ್ಷವನ್ನು ಪಡೆಯಲು ಬೇಕಾದ ಒಂದು ಅಮೂಲ್ಯ ಜ್ಞಾನ. ಈ ರೀತಿ ಅಧಿಷ್ಠಾನದಿಂದ ಸಿದ್ಧಿಯನ್ನು ಪಡೆದವರ ಬಗ್ಗೆ ಕೃಷ್ಣ ಮುಂದೆ ವಿವರಿಸುತ್ತಾನೆ.