ಶ್ಲೋಕ – 26
ಕಾಮಕ್ರೋಧವಿಯುಕ್ತಾನಾಂ ಯತೀನಾಂ ಯತಚೇತಸಾಮ್ ।
ಅಭಿತೋ ಬ್ರಹ್ಮನಿರ್ಬಾಣಂ ವರ್ತತೇ ವಿದಿತಾತ್ಮನಾಮ್ ॥೨೬॥
ಕಾಮ ಕ್ರೋಧ ವಿಯುಕ್ತಾನಾಮ್ ಯತೀನಾಮ್ ಯತಚೇತಸಾಮ್ ।
ಅಭಿತಃ ಬ್ರಹ್ಮನಿರ್ಬಾಣಮ್ ವರ್ತತೇ ವಿದಿತ ಆತ್ಮನಾಮ್-ಪ್ರಯತ್ನಶೀಲರಾಗಿ ಒಲುಮೆ-ಸಿಡುಕುಗಳನ್ನು ಓದ್ದವರಿಗೆ, ಬಗೆಯನ್ನು ಗೆದ್ದವರಿಗೆ ಭಗವಂತನನ್ನು ಬಲ್ಲವರಿಗೆ ಎಲ್ಲೆಡೆಯು ನಿತ್ಯ ಸ್ವರೂಪನಾದ ಭಗವಂತ ತುಂಬಿರುತ್ತಾನೆ.
ಕಾಮ-ಕ್ರೋಧವನ್ನು ಸಂಪೂರ್ಣ ತೊರೆದು, ಪೂರ್ಣವಾಗಿ ಇಂದ್ರಿಯನಿಗ್ರಹ ಸಾಧಿಸಿದವರಿಗೆ ಎಲ್ಲೆಡೆಯೂ ಎಲ್ಲ ಜೀವ ಜಂತುವಿನಲ್ಲೂ ಭಗವಂತ ಕಾಣಿಸುತ್ತಾನೆ. ಯಾವುದೇ ಐಹಿಕ ಕ್ಲೇಶದ ನೋವು ಇವರಿಗಿರುವುದಿಲ್ಲ. ಇವರ ಮನದಲ್ಲಿ ಸರ್ವಾಂತರ್ಯಾಮಿಯಾದ, ನಿತ್ಯ ಸ್ವರೂಪನಾದ ಭಗವಂತ ನೆಲೆನಿಂತಿರುತ್ತಾನೆ.