ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 05

ಶ್ಲೋಕ – 26

ಕಾಮಕ್ರೋಧವಿಯುಕ್ತಾನಾಂ ಯತೀನಾಂ ಯತಚೇತಸಾಮ್ ।
ಅಭಿತೋ ಬ್ರಹ್ಮನಿರ್ಬಾಣಂ ವರ್ತತೇ ವಿದಿತಾತ್ಮನಾಮ್ ॥೨೬॥

ಕಾಮ ಕ್ರೋಧ ವಿಯುಕ್ತಾನಾಮ್ ಯತೀನಾಮ್ ಯತಚೇತಸಾಮ್ ।

ಅಭಿತಃ ಬ್ರಹ್ಮನಿರ್ಬಾಣಮ್ ವರ್ತತೇ ವಿದಿತ ಆತ್ಮನಾಮ್-ಪ್ರಯತ್ನಶೀಲರಾಗಿ ಒಲುಮೆ-ಸಿಡುಕುಗಳನ್ನು ಓದ್ದವರಿಗೆ, ಬಗೆಯನ್ನು ಗೆದ್ದವರಿಗೆ ಭಗವಂತನನ್ನು ಬಲ್ಲವರಿಗೆ ಎಲ್ಲೆಡೆಯು ನಿತ್ಯ ಸ್ವರೂಪನಾದ ಭಗವಂತ ತುಂಬಿರುತ್ತಾನೆ.

ಕಾಮ-ಕ್ರೋಧವನ್ನು ಸಂಪೂರ್ಣ ತೊರೆದು, ಪೂರ್ಣವಾಗಿ ಇಂದ್ರಿಯನಿಗ್ರಹ ಸಾಧಿಸಿದವರಿಗೆ ಎಲ್ಲೆಡೆಯೂ ಎಲ್ಲ ಜೀವ ಜಂತುವಿನಲ್ಲೂ ಭಗವಂತ ಕಾಣಿಸುತ್ತಾನೆ. ಯಾವುದೇ ಐಹಿಕ ಕ್ಲೇಶದ ನೋವು ಇವರಿಗಿರುವುದಿಲ್ಲ. ಇವರ ಮನದಲ್ಲಿ ಸರ್ವಾಂತರ್ಯಾಮಿಯಾದ, ನಿತ್ಯ ಸ್ವರೂಪನಾದ ಭಗವಂತ ನೆಲೆನಿಂತಿರುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *