ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 10

ಶ್ಲೋಕ – 42

ಅಥವಾ ಬಹುನೈತೇನ ಕಿಂ ಜ್ಞಾತೇನ ತವಾರ್ಜುನ ।
ವಿಷ್ಟಭ್ಯಾಹಮಿದಂ ಕೃತ್ಸ್ನಮೇಕಾಂಶೇನ ಸ್ಥಿತೋ ಜಗತ್ ॥೪೨॥

ಅಥವಾ ಬಹುನಾ ಏತೇನ ಕಿಮ್ ಜ್ಞಾತೇನ ತವ ಅರ್ಜುನ ।

ವಿಷ್ಟಭ್ಯ ಅಹಮ್ ಇದಮ್ ಕೃತ್ಸ್ನಮ್ ಏಕ ಅಂಶೇನ ಸ್ಥಿತಃ ಜಗತ್ –ಅಥವಾ, ಓ ಅರ್ಜುನ, ಎಲ್ಲವನ್ನು ತಿಳಿದು ಏನು ಬಂತು ? ಸಾರವಿದು: ನಾನು ನನ್ನ ಅಳವಿನ ಒಂದು ಅಂಶದಿಂದ ಈ ಇಡಿಯ ವಿಶ್ವವನ್ನು ತಬ್ಬಿ ತಡೆಹಿಡಿದು ನಡೆಸುತ್ತಿದ್ದೇನೆ.

ಒಂದೊಂದನ್ನು ಪ್ರತ್ಯೇಕ ತಿಳಿದು ಹೇಳುವುದು ಅಸಾಧ್ಯ. ಈ ರೀತಿ ಮಾಡುವ ಅಗತ್ಯವೂ ಇಲ್ಲ. ಎಲ್ಲವುದರೊಳಗೂ ಒಂದು ವಿಶಿಷ್ಠ ಶಕ್ತಿಯಾಗಿ ಭಗವಂತನಿದ್ದಾನೆ. ಎಲ್ಲದರಲ್ಲೂ ಭಗವಂತನ ವಿಭೂತಿ ಅಡಗಿದೆ. ಕೃಷ್ಣ ಹೇಳುತ್ತಾನೆ “ ಇಡೀ ವಿಶ್ವವನ್ನು ನಾನು ನನ್ನ ಸಾಮರ್ಥ್ಯದ ಒಂದು ತುಣುಕಿನಿಂದ ವ್ಯಾಪಿಸಿ ನಿಂತಿದ್ದೇನೆ” ಎಂದು. ಪುರುಷ ಸೂಕ್ತದಲ್ಲಿ ಹೇಳುವಂತೆ:

ಪಾದೋಸ್ಯ ವಿಶ್ವಾ ಭೂತಾನಿ| ತ್ರಿಪಾದಸ್ಯಾಮೃತಂ ದಿವಿ|
ತ್ರಿಪಾದೂರ್ಧ್ವ ಉದೈತ್ಪುರುಷಃ| ಪಾದೋಸ್ಯೇಹಾಭವಾತ್ಪುನಃ|
ತತೋ ವಿಷ್ವಂವ್ಯಕ್ರಾಮತ್| ಸಾಶನಾನಶನೇ ಅಭಿ|

ಈ ಪ್ರಪಂಚದಲ್ಲಿ ವ್ಯಾಪಿಸಿರುವುದು ಭಗವಂತನ ಕೇವಲ ಕಾಲು ಭಾಗವಷ್ಟೇ. ಅಮೃತಮಯವಾದ ಮುಕ್ಕಾಲು ಭಾಗ ದಿವ್ಯಲೋಕ (ಮುಕ್ತಲೋಕ) ದಲ್ಲಿ ನೆಲೆಸಿದೆ. “ಜಗತ್ತಿನ ಸಮಸ್ತ ವಸ್ತುವಿನ ಒಳಗೂ ಹೊರಗೂ ತುಂಬಿ ನಾನು ವಿಶ್ವ ರೂಪನಾಗಿದ್ದೇನೆ” ಎನ್ನುತ್ತಾನೆ ಕೃಷ್ಣ.

ಇತಿ ದಶಮೋSಧ್ಯಾಯಃ
ಹತ್ತನೆಯ ಅಧ್ಯಾಯ ಮುಗಿಯಿತು

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *