ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 04

ಋಷಿಭಿರ್ಬಹುಧಾ ಗೀತಂ ಛಂದೋಭಿರ್ವಿವಿಧೈಃ ಪೃಥಕ್ ।
ಬ್ರಹ್ಮಸೂತ್ರಪದೈಶ್ಚೈವ ಹೇತುಮದ್ಭಿರ್ವಿನಿಶ್ಚಿತೈಃ ॥೪॥

ಋಷಿಭಿಃ ಬಹುಧಾ ಗೀತಮ್ ಛಂದೋಭಿಃ ವಿವಿಧೈಃ ಪೃಥಕ್ ।

ಬ್ರಹ್ಮಸೂತ್ರಪದೈಃ ಚ ಏವ ಹೇತುಮದ್ಭಿಃ ವಿನಿಶ್ಚಿತೈಃ –ಬಗೆಬಗೆಯ ಬೇರೆಬೇರೆ ಮಂತ್ರಗಳಿಂದ ಋಷಿಗಳು ಅದನ್ನು ಬಗೆಬಗೆಯಿಂದ ಹಾಡಿದ್ದಾರೆ. ಯುಕ್ತಿಯಿಂದ ನಿರ್ಣಯಿಸುವ ವೇದಾಂತ ಸೂತ್ರದ ನುಡಿಗಳು ಕೂಡ.

ಜ್ಞಾನಿಗಳು ಕೂಡ ಈ ವಿಚಾರವನ್ನು ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಾರೆ. ಅದು ಅವರ ಅನುಭವಕ್ಕೆ ಸೀಮಿತವಾಗಿರುತ್ತದೆ. ಬ್ರಹ್ಮಸೂತ್ರದಲ್ಲಿ ಹೇಳಿರುವ ವಿಚಾರ ಸುಲಭವಾಗಿ ಅರ್ಥವಾಗದು. ಆದ್ದರಿಂದ ನಿಜವನ್ನು ಕ್ಷೇತ್ರಜ್ಞನಾದ ನಾನೆ ನೇರವಾಗಿ ಹೇಳುತ್ತೇನೆ ಕೇಳು.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 12

ಶ್ಲೋಕ – 01 ಹಿಂದಿನ ಅಧ್ಯಾಯದ ಕೊನೆಯಲ್ಲಿ ಭಗವಂತ “ನಿಷ್ಕಾಮ ಭಕ್ತಿಯಿಂದ ಮಾತ್ರ ನನ್ನನ್ನು ಕಾಣಲು ಸಾಧ್ಯ” ಎಂದು ಹೇಳಿದ. …

Leave a Reply

Your email address will not be published. Required fields are marked *