ಶ್ಲೋಕ – 04
ಋಷಿಭಿರ್ಬಹುಧಾ ಗೀತಂ ಛಂದೋಭಿರ್ವಿವಿಧೈಃ ಪೃಥಕ್ ।
ಬ್ರಹ್ಮಸೂತ್ರಪದೈಶ್ಚೈವ ಹೇತುಮದ್ಭಿರ್ವಿನಿಶ್ಚಿತೈಃ ॥೪॥
ಋಷಿಭಿಃ ಬಹುಧಾ ಗೀತಮ್ ಛಂದೋಭಿಃ ವಿವಿಧೈಃ ಪೃಥಕ್ ।
ಬ್ರಹ್ಮಸೂತ್ರಪದೈಃ ಚ ಏವ ಹೇತುಮದ್ಭಿಃ ವಿನಿಶ್ಚಿತೈಃ –ಬಗೆಬಗೆಯ ಬೇರೆಬೇರೆ ಮಂತ್ರಗಳಿಂದ ಋಷಿಗಳು ಅದನ್ನು ಬಗೆಬಗೆಯಿಂದ ಹಾಡಿದ್ದಾರೆ. ಯುಕ್ತಿಯಿಂದ ನಿರ್ಣಯಿಸುವ ವೇದಾಂತ ಸೂತ್ರದ ನುಡಿಗಳು ಕೂಡ.
ಜ್ಞಾನಿಗಳು ಕೂಡ ಈ ವಿಚಾರವನ್ನು ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಾರೆ. ಅದು ಅವರ ಅನುಭವಕ್ಕೆ ಸೀಮಿತವಾಗಿರುತ್ತದೆ. ಬ್ರಹ್ಮಸೂತ್ರದಲ್ಲಿ ಹೇಳಿರುವ ವಿಚಾರ ಸುಲಭವಾಗಿ ಅರ್ಥವಾಗದು. ಆದ್ದರಿಂದ ನಿಜವನ್ನು ಕ್ಷೇತ್ರಜ್ಞನಾದ ನಾನೆ ನೇರವಾಗಿ ಹೇಳುತ್ತೇನೆ ಕೇಳು.