Tag Archives: ಮೇ

ಎ.ಪಿ. ಮಾಲತಿ

AP Malathi

ಎ.ಪಿ. ಮಾಲತಿ (೬.೫.೧೯೪೪): ಪ್ರಸಿದ್ಧ ಕತೆ, ಕಾದಂಬರಿಕಾರ್ತಿ ಎ.ಪಿ. ಮಾಲತಿಯವರು ಹುಟ್ಟಿದ್ದು ಭಟ್ಕಳದಲ್ಲಿ ೧೯೪೪ ರ ಮೇ ೬ ರಂದು. ತಂದೆ ಗಣೇಶಭಟ್ಟರು, ತಾಯಿ ಕಾವೇರಿ. ಪ್ರಾರಂಭಿಕ ಶಿಕ್ಷಣ ಕರ್ಕಿ ಹಾಗೂ ಹೊನ್ನಾವರದಲ್ಲಿ. ಧಾರವಾಡದ ಎ.ಕೆ. ಗರ್ಲ್ಸ್ ಹೈಸ್ಕೂಲಿನಲ್ಲಿ ಪ್ರೌಢಶಾಲಾ ಶಿಕ್ಷಣ. ಪಿ.ಯು.ಗೆ ಸೇರಿದ್ದು ಕರ್ನಾಟಕ ಕಾಲೇಜು. ಪ್ರತಿದಿನ ಮುಂಜಾನೆ ವಾಯುವಿಹಾರಕ್ಕೆ ತೆರಳುತ್ತಿದ್ದ ಬೇಂದ್ರೆಯವರನ್ನು ಕಂಡಾಗ ಕುತೂಹಲ, ಬೆರಗು. ಆಕಾಶವಾಣಿ ‘ಗಿಳಿವಿಂಡು’ ಮಕ್ಕಳ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೇಂದ್ರೆಯವರ ಕವನ ಹಾಡಿ, ನೃತ್ಯದಲ್ಲಿ ಭಾಗವಹಿಸಿದಾಗ ಮನಸ್ಸಿಗಾಗುತ್ತಿದ್ದ ಅದೆಂತಾದ್ದೋ ಆನಂದ. ಮನೆಯಲ್ಲಿದ್ದ ತಾಯಿ ನಾಲ್ಕನೆಯ ತರಗತಿಯವರೆಗೆ ಓದಿದ್ದರೂ …

ಪೂರ್ತಿ ಓದಿ...

ಭುವನೇಶ್ವರಿ ಹೆಗಡೆ

Bhuvaneshwari Hegde

ಭುವನೇಶ್ವರಿ ಹೆಗಡೆ (೦೬.೦೫.೧೯೫೬): ಹಾಸ್ಯಬರಹಗಾರ್ತಿ, ಭಾಷಣಕಾರ್ತಿ, ಪ್ರಾಧ್ಯಾಪಕಿ ಭುವನೇಶ್ವರಿ ಹೆಗಡೆಯವರು ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕತ್ರಗಾಲದಲ್ಲಿ. ತಂದೆ ಗಣಪತಿ ಹೆಗಡೆ, ತಾಯಿ ಗೌರಮ್ಮ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಡೆದ ಎಂ.ಎ. (ಅರ್ಥಶಾಸ್ತ್ರ) ಪದವಿ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಉಪನ್ಯಾಸಕಿಯಾಗಿ ವೃತ್ತಿ ಪ್ರಾರಂಭ. ಅರ್ಥಶಾಸ್ತ್ರದ ಉಪನ್ಯಾಸಕಿಯಾದರೂ ತಮ್ಮ ಹುಟ್ಟಿನ – ಪ್ರಕೃತಿಯ ಪರಿಸರದಿಂದ ನಗೆಯನ್ನು ಹಂಚಿಕೊಳ್ಳುವ ಮನೋಧರ್ಮವನ್ನು ರೂಢಿಸಿಕೊಂಡಿದ್ದು, ಇದಕ್ಕಾಗಿ ಕಂಡುಕೊಂಡ ಅಭಿವ್ಯಕ್ತಿ ಮಾರ್ಗವೆಂದರೆ ಹಾಸ್ಯ ಬರಹಗಳು. ಯಾವುದೇ ಸಂದರ್ಭಕ್ಕೆ ತಕ್ಕ ಹಾಗೆ ಭಾಷೆಯನ್ನೂ ಹೊಂದಿಸಿಕೊಳ್ಳುವಲ್ಲಿ ಪದಗಳನ್ನು ತಿರುಚಿಯೋ, ಹೊಸಪದಗಳನ್ನು ಸೃಷ್ಟಿಸಿಯೋ ನಗೆ ಉಕ್ಕಿಸುವುದರಲ್ಲಿ …

ಪೂರ್ತಿ ಓದಿ...

ಎಸ್.ಕೆ.ನಾಡಿಗ್‌

Sk Nadig

ಎಸ್.ಕೆ. ನಾಡಿಗ್‌ (೦೬.೦೫.೧೯೨೮): ವ್ಯಂಗ್ಯಚಿತ್ರದ ಮೂಲಕ ಹಾಸ್ಯದ ಹೊನಲನ್ನು ಹರಿಸುತ್ತಿರುವ ನಾಡಿಗ್‌ರವರು ಹುಟ್ಟಿದ್ದು ಶಿವಮೊಗ್ಗದಲ್ಲಿ. ತಂದೆ ಕೃಷ್ಣ ಸ್ವಾಮಿರಾವ್ ನಾಡಿಗ್, ತಾಯಿ ರಾಧಮ್ಮ, ಓದಿದ್ದು ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾಮರ್ಸ್‌ ಪದವಿಗಾಗಿ. ಚಿಕ್ಕಂದಿನಿಂದಲೂ ಗೆರೆಗಳೊಡನೆ ಚೆಲ್ಲಾಟ, ತೋಚಿದ್ದು-ಗೀಚಿದ್ದು. ಕೊರವಂಜಿ ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಆರ್‌.ಕೆ. ಲಕ್ಷ್ಮಣ್‌ರವರ ವ್ಯಂಗ್ಯ ಚಿತ್ರಗಳನ್ನ ನೋಡಿ ತಾನೂ ಏಕೆ ಬರೆಯಬಾರದೆಂಬ ಆಲೋಚನೆ. ೧೯೪೭ರಲ್ಲಿ ಮೊದಲ ವ್ಯಂಗ್ಯಚಿತ್ರ ಆಂಗ್ಲ ಪತ್ರಿಕೆ ಮಿನಿ ಮ್ಯಾಗ್‌ ನಲ್ಲಿ ಪ್ರಕಟಿತ. ಇದುವರೆವಿಗೂ ಬರೆದ ವ್ಯಂಗ್ಯ ಚಿತ್ರಗಳ ಸಂಖ್ಯೆ ಸುಮಾರು ೨೦ ಸಾವಿರಕ್ಕೂ ಹೆಚ್ಚು. [sociallocker]ಕೊರವಂಜಿ, ಪ್ರಜಾವಾಣಿ, ಜನಪ್ರಗತಿ, ಶಂಕರ್ಸ್‌ …

ಪೂರ್ತಿ ಓದಿ...

ಪ್ರೊ. ಜಿ. ಅಬ್ದುಲ್ ಬಷೀರ್

G Abdul Basheer

ಪ್ರೊ. ಜಿ. ಅಬ್ದುಲ್ ಬಷೀರ್ (೬-೫-೧೯೪೭): ವ್ಯಾಕರಣ, ಭಾಷೆ, ಕಾವ್ಯಮೀಮಾಂಸೆ, ವಿಮರ್ಶಾಕ್ಷೇತ್ರಗಳಲ್ಲಿ ದುಡಿಯುತ್ತಿರುವ ಅಬ್ದುಲ್ ಬಷೀರ್‌ರವರು ಹುಟ್ಟಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕೆಬ್ಬೆದೊಡ್ಡಿ ಗ್ರಾಮದಲ್ಲಿ. ತಂದೆ ಅಬ್ದುಲ್ ಗಫೂರ್‌ಸಾಬ್, ತಾಯಿ ಬಿಯಾಂಬಿ. ಪ್ರಾಥಮಿಕ ವಿದ್ಯಾಭ್ಯಾಸ ಗಬ್ಬಾಡಿ ಶಾಲೆಯಲ್ಲಿ. ಹೈಸ್ಕೂಲಿಗೆ ಸೇರಿದ್ದು ಹಾರೋಹಳ್ಳಿ ರೂರಲ್ ಹೈಸ್ಕೂಲು. ಕಾಲೇಜು ವಿದ್ಯಾಭ್ಯಾಸ ಆಚಾರ‍್ಯ ಪಾಠಶಾಲೆಯ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಎ. (ಆನರ್ಸ್) ಮತ್ತು ಎಂ.ಎ. (ಕನ್ನಡ) ಪದವಿ ಬೆಂಗಳೂರು ವಿಶ್ವವಿದ್ಯಾಲಯದಿಂದ. [sociallocker]೧೯೭೨ರಲ್ಲಿ ಉದ್ಯೋಗಕ್ಕೆ ಸೇರಿದ್ದು ಕಲಿತ ಕಾಲೇಜಿನಲ್ಲೇ ಅಧ್ಯಾಪಕರ ವೃತ್ತಿ ಆರಂಭ. ಕನ್ನಡ …

ಪೂರ್ತಿ ಓದಿ...

ಬಿ.ಎಲ್‌. ವೇಣು

BL Veenu

ಬಿ.ಎಲ್‌. ವೇಣು (೦೫.೦೫.೧೯೪೫): ಕಥೆ, ಕಾದಂಬರಿ, ನಾಟಕ, ಚಿತ್ರಕಥೆ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ತಮ್ಮ ವೈಚಾರಿಕತೆ, ಪ್ರಯೋಗಶೀಲತೆಗಳಿಂದ, ಪ್ರಗತಿಪರ ವಿಚಾರಗಳಿಂದ ಯಾವ ಗುಂಪಿಗೂ ಸೀಮಿತವಾಗದೆ ಸಾಹಿತ್ಯರಚನೆಯಲ್ಲಿ ನಿರತರಾಗಿರುವ ವೇಣುರವರು ಹುಟ್ಟಿದ್ದು ಕೋಟಿಕೊತ್ತಲಗಳ ಊರಾದ ಚಿತ್ರದುರ್ಗದಲ್ಲಿ. ೧೯೪೫ರ ಮೇ ೫ ರಂದು. ತಂದೆ ವೃತ್ತಿರಂಗಭೂಮಿಯ ನಟರಾದ ಲಕ್ಷ್ಮಯ್ಯ, ತಾಯಿ ಸುಶೀಲಮ್ಮ ಹಾರ್ಮೋನಿಯಂ ವಾದಕಿ. ರಂಗಭೂಮಿನಟರೆಂದ ಮೇಲೆ ಅನಿಯತ ವರಮಾನದಿಂದ ಬೆನ್ನಿಗೆ ಕಟ್ಟಿಕೊಂಡೇ ಬಂದ ಬಡತನದ ಬದುಕು. ಆದರೂ ವೇಣುವಿಗೆ ಪ್ರೈಮರಿ ಶಾಲೆಯಲ್ಲಿದ್ದಾಗಲೇ ನಾಟಕದ ಬಗ್ಗೆ ಎಲ್ಲಿಲ್ಲದ ಆಸ್ಥೆ ಬೆಳೆಯತೊಡಗಿತು. ದುರ್ಗಕ್ಕೆ ಬಂದು ಮೊಕ್ಕಾಂ ಮಾಡುತ್ತಿದ್ದ ಕಂಪನಿ …

ಪೂರ್ತಿ ಓದಿ...

ಪ್ರೊ. ಎನ್.ಎ. ನಿಕ್ಕಂ

NV Nikkam

ಪ್ರೊ. ಎನ್.ಎ. ನಿಕ್ಕಂ (೫-೫-೧೯೦೩ – ೧೯೭೪): ದಾರ್ಶನಿಕ, ತತ್ತ್ವಶಾಸ್ತ್ರ ಪ್ರಾಧ್ಯಾಪಕ, ಚಿಂತಕ ನಾರಾಯಣರಾವ್ ಅಪ್ಪೂರಾವ್ ನಿಕ್ಕಂರವರು ಹುಟ್ಟಿದ್ದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ. ಪ್ರಾಥಮಿಕ ಶಿಕ್ಷಣ ಕೆಸ್ತೂರು, ಮದ್ದೂರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ. ೧೯೨೯ರ ತತ್ತ್ವಶಾಸ್ತ್ರದಲ್ಲಿ ಎಂ.ಎ. ಪದವಿ. ಬಾಬಾ ಸ್ಮಾರಕ ಸುವರ್ಣಪದಕ ವಿಜೇತರು. ದಾಮೋದರದಾಸ್ ವಿದ್ಯಾರ್ಥಿವೇತನದಿಂದ ಇಂಗ್ಲೆಂಡಿನಲ್ಲಿ ತತ್ತ್ವಶಾಸ್ತ್ರದಲ್ಲಿ ಉಚ್ಚಶಿಕ್ಷಣ. [sociallocker]೧೯೪೪ರಲ್ಲಿ ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ತತ್ತ್ವಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾಗಿ ನೇಮಕ. ಫುಲ್‌ಬ್ರೈಟ್ ಮತ್ತು ಫೋರ‍್ಡ್ ಫೌಂಡೇಶನ್ ವಿದ್ಯಾರ್ಥಿವೇತನದಿಂದ ಅಮೆರಿಕದ ಯೇಲ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ. ಸೆಲಿಮನ್ …

ಪೂರ್ತಿ ಓದಿ...

ಗೀತಾ ಬಾಲಸುಬ್ರಹ್ಮಣ್ಯಂ

Geetha Balasubramanyam

ಗೀತಾ ಬಾಲಸುಬ್ರಹ್ಮಣ್ಯಂ (೦೫.೦೫.೧೯೫೬): ಕೊಣನೂರಿನ ಸಂಗೀತ ಹಾಗೂ ಹರಿಕಥಾ ವಿದ್ವಾಂಸರ ಮನೆತನದಿಂದ ಬಂದ ಗೀತಾರವರು ಹುಟ್ಟಿದ್ದು ಹಾಸನ ಜಿಲ್ಲೆಯ ಅರಸೀಕೆರೆ. ತಂದೆ ಸಂಗೀತ ವಿದ್ವಾಂಸರಾದ ರಾಮಕೃಷ್ಣಶಾಸ್ತ್ರಿಗಳು, ತಾಯಿ ವಾಗೀಶ್ವರಿ ಶಾಸ್ತ್ರಿ, ಪ್ರಸಿದ್ಧ ಲೇಖಕಿ. ಓದಿದ್ದು ಬಿ.ಎಸ್ಸಿ. ಸಂಗೀತಾಭಿರುಚಿಯಿಂದ ಪಡೆದದ್ದು ಪ್ರಥಮ ಶ್ರೇಣಿಯಲ್ಲಿ ಎಂ.ಎ. ಪದವಿ ಮತ್ತು ಸೀನಿಯರ್‌ ಗ್ರೇಡ್ ಸಂಗೀತ, ಶೇಷಾದ್ರಿಪುರಂ ಬಾಲಕಿಯರ ಪ್ರೌಢಶಾಲೆಯಲ್ಲಿ ಸಂಗೀತ ಶಿಕ್ಷಕಿಯಾಗಿ ಕಾರ್ಯ ನಿರ್ವಹಣೆ. [sociallocker]ಶಾಲಾ ಕಾಲೇಜು ದಿನಗಳಿಂದಲೂ ಬೆಂಗಳೂರು ಮೈಸೂರು, ತಿಪಟೂರು, ಚಿತ್ರದುರ್ಗ ಹೀಗೆ ಹಲವಾರು ಕಡೆ ರಾಜ್ಯ ಮಟ್ಟದ ಶಾಸ್ತ್ರೀಯ ಸಂಗೀತ, ಭಾವಗೀತೆ, ಚಿತ್ರಗೀತೆಗಳ ಸ್ಪರ್ಧೆಯಲ್ಲಿ …

ಪೂರ್ತಿ ಓದಿ...

ಡಾ. ಸುಮತೀಂದ್ರನಾಡಿಗ್

Sumatheendra R Nadig

ಡಾ. ಸುಮತೀಂದ್ರನಾಡಿಗ್ (೪-೫-೧೯೩೫): ಕಾವ್ಯ, ಕಥೆ, ಕಾದಂಬರಿ, ನಾಟಕ, ವಿಮರ್ಶೆ ಹೀಗೆ ಸಾಹಿತ್ಯದ ಹಲವಾರು ಕ್ಷೇತ್ರಗಳಲ್ಲಿ ದುಡಿದ ನಾಡಿಗರು ಹುಟ್ಟಿದ್ದು ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ. ತಂದೆ ರಾಘವೇಂದ್ರರಾವ್, ತಾಯಿ ಸುಬ್ಬಮ್ಮ. ತಂದೆ ಪೊಲೀಸ್ ವೃತ್ತಿಯಲ್ಲಿದ್ದುದರಿಂದ ನಾಡಿಗರ ಬಾಲ್ಯ ಕಳಸ, ಸೊರಬ, ಶಿರಾಳ ಕೊಪ್ಪ ಆನವಟ್ಟಿ, ಸಾಗರ ಹೀಗೆ ಮಲೆನಾಡು, ಬಯಲು ಸೀಮೆಯಲ್ಲಿ ವಿದ್ಯಾಭ್ಯಾಸ. ಇಂಟರ್ ಮೀಡಿಯೆಟ್ ಓದಿದ್ದು ಶಿವಮೊಗ್ಗ ಕಾಲೇಜು. ಕುವೆಂಪುರವರನ್ನು ಮೊದಲ ಬಾರಿಗೆ ಕಂಡು ರಾಮಾಯಣ ದರ್ಶನಂ ಓದಿ ಪುಳಕಿತರಾದರು. ಹೈಸ್ಕೂಲಿನಲ್ಲಿ ಓದುತ್ತಿದ್ದಾಗಲೇ ಕೈಬರಹದ ಪತ್ರಿಕೆಯಲ್ಲಿ ಕವನ ಪ್ರಕಟ. ಇವರ ಕವನ ಓದಿದ …

ಪೂರ್ತಿ ಓದಿ...

ಎಚ್.ಕೆ. ನರಸಿಂಹಮೂರ್ತಿ

HK Narasimhamurthy

ಎಚ್.ಕೆ. ನರಸಿಂಹಮೂರ್ತಿ (೦೪.೦೫.೧೯೪೬): ದೇಶದ ಅತ್ಯುತ್ತಮ ಪಿಟೀಲು ವಾದಕರೆನಿಸಿರುವ ನರಸಿಂಹ ಮೂರ್ತಿಯವರು ಹುಟ್ಟಿದ್ದು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ. ತಂದೆ ಎಚ್.ಎಸ್. ಕೃಷ್ಣಮೂರ್ತಿ, ಸ್ವಾತಂತ್ರ‍್ಯ ಹೋರಾಟಗಾರರು. ತಾಯಿ ಜಯಲಕ್ಷ್ಮಿ. ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಪದವಿ. ಸಂಗೀತದಲ್ಲಿ ಬೆಳೆದ ಒಲವು. ಕೇಶವಯ್ಯನವರಿಂದ ಕಲಿತ ಗಾಯನ ಮತ್ತು ಎಚ್.ಟಿ. ಪುಟ್ಟಸ್ವಾಮಯ್ಯ, ಎಚ್.ವಿ. ಕೃಷ್ಣನ್, ಎಂ.ಸಿ. ಪುಟ್ಟಸ್ವಾಮಯ್ಯ, ಟಿ.ಪುಟ್ಟಸ್ವಾಮಯ್ಯ, ಎ.ಕೆ.ಮುತ್ತಣ್ಣ ಇವರ ಬಳಿ ಕಲಿತದ್ದು ಗಾಯನ ಹಾಗೂ ಪಿಟೀಲು ವಾದನ. ಕರ್ನಾಟಕ ಸರಕಾರದ ಟೆಕ್ನಿಕಲ್ ಬೋರ್ಡ್‌‌ನಿಂದ ಸೀನಿಯರ್‌ ಮ್ಯೂಸಿಕ್, ಮದರಾಸಿನ ಸೆಂಟ್ರಲ್ ಕಾಲೇಜ್ ಆಫ್ ಮ್ಯೂಸಿಕ್ ನಿಂದ ಪ್ರಥಮ ದರ್ಜೆಯಲ್ಲಿ …

ಪೂರ್ತಿ ಓದಿ...

ಗಾಯತ್ರಿ ಮೂರ್ತಿ

Gayathri Murthy

ಗಾಯತ್ರಿ ಮೂರ್ತಿ (೦೪.೦೫.೧೯೪೮): ಮಕ್ಕಳ ಸಾಹಿತ್ಯ ಕ್ಷೇತ್ರದ ಕಥೆ, ಕವನ, ವಿಜ್ಞಾನ ಪುಸ್ತಕಗಳ ರಚನೆಯಲ್ಲಿ ತೊಡಗಿಸಿಕೊಂಡಿರುವ ಗಾಯತ್ರಿ ಮೂರ್ತಿಯವರು ಹುಟ್ಟಿದ್ದು ಮೈಸೂರಿನಲ್ಲಿ. ತಂದೆ ಮಹಾರಾಜ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದ ಕೆ. ರಾಮಸ್ವಾಮಿ ಮತ್ತು ತಾಯಿ ಇಂದುಮತಿ. ಪ್ರಾರಂಭಿಕ ಶಿಕ್ಷಣ ಕುಣಿಗಲ್, ಪ್ರೌಢಶಾಲಾ ವಿದ್ಯಾಭ್ಯಾಸ ಶಿವಮೊಗ್ಗ ಹಾಗೂ ಮೈಸೂರುಗಳಲ್ಲಿ. ಶಾರದಾ ವಿಲಾಸ್ ಕಾಲೇಜಿನಿಂದ ಬಿ.ಎಸ್ ಸಿ. ಹಾಗೂ ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯಿಂದ ಪಡೆದ ಎಂ.ಎಸ್ ಸಿ. ಪದವಿ. ಅಧ್ಯಾಪಕರಾಗಿ ಸೇರಿದ್ದು ಬೆಂಗಳೂರಿನ ಶ್ರೀ ಭಗವಾನ್ ಮಹಾವೀರ್ ಜೈನ್ ಕಾಲೇಜಿನ ಭೌತಶಾಸ್ತ್ರ ವಿಭಾಗದಲ್ಲಿ. ಕಾಲೇಜಿನಲ್ಲಿ ಭೌತಶಾಸ್ತ್ರವನ್ನು ಬೋಧಿಸಿದಷ್ಟೇ ಅಲ್ಲದೆ …

ಪೂರ್ತಿ ಓದಿ...